ತುಂಗೆ ತುಂಬಿ ಹರಿಯುತ್ತಿದ್ದು ಗಾಂಧಿಮೈದಾನದ ಅಂಗಡಿ ಮುಂಗಟ್ಟುಗಳನ್ನು ತೆರವುಗೊಳಿಸಲಾಗಿದೆ. ಅಲ್ಲಿ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದೆ. ಪರ್ಯಾಯ ರಸ್ತೆ ಜಲಾವೃತ್ತಗೊಂಡು ವಾಹನ ಸಂಚಾರ ಸ್ಥಗಿತಗೊಂಡಿತ್ತು. ಶೃಂಗೇರಿಗೆ ಬಂದ ಪ್ರವಾಸಿಗರ ವಾಹನಗಳು, ಖಾಸಗಿ ಬಸ್ ಹಾಗೂ ಇತರ ವಾಹನ ಚಾಲಕರು ಹರಸಾಹಸದಿಂದ ವಾಹನ ಚಲಾಯಿಸುವ ಸ್ಥಿತಿ ಉಂಟಾಗಿತ್ತು. ರಸ್ತೆಯಲ್ಲಿ ಪಾದಚಾರಿಗಳು ನಡೆದುಕೊಂಡು ಹೋಗಲು ಪರದಾಡುವಂತಾಯಿತು.