ಕೃಷಿ ಇಲಾಖೆ ಜಂಟಿ ನಿರ್ದೇಶಕಿ ದೀಪಜಾ ಮಾತನಾಡಿ, ಕೃಷಿ ಯೋಜನೆಯಡಿಯಲ್ಲಿ ನೀರು ಸಂಗ್ರಹಣಾ ಹೊಂಡ ರಚನೆ, ನೀರು ಇಂಗದಂತೆ ತಡೆಯಲು ಪಾಲಿಥಿನ್ ಹೊದಿಕೆ, ಹೊಂಡದಿಂದ ನೀರು ಎತ್ತಲು ಡಿಸೇಲ್ ಪಂಪ್ ಸೆಟ್ ಹಾಗೂ ನೀರನ್ನು ಬೆಳೆಗೆ ಹಾಯಿಸಲು ಲಘು ನೀರಾವರಿ, ಕೃಷಿ ಹೊಂಡದ ಸುತ್ತಲೂ ನೆರಳು ಪರದೆ, ಬದು ನಿರ್ಮಾಣಕ್ಕೆ ಹಲವು ಸೌಲಭ್ಯಗಳಿದ್ದು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.