ಬಹುಮುಖ್ಯವಾಗಿ ರೈತರ ಬದುಕು ಹಸನಾಗುವ ನಿಟ್ಟಿನಲ್ಲಿ ನೀರಾವರಿ ಕ್ಷೇತ್ರಕ್ಕೆ ಅತ್ಯಂತ ಹೆಚ್ಚಿನ ಪಾಲು ನೀಡಿರುವುದು ಶ್ಲಾಘನೀಯವಾದುವು. ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಿರುವುದು ಕ್ರಾಂತಿಕಾರಿ ನಿರ್ಧಾರ. ಇದಲ್ಲದೆ, ಹಿಂದುಳಿದ ವರ್ಗಗಳ ಬಗ್ಗೆ ವಿಶೇಷ ಕಾಳಜಿ ವಹಿಸಿದ್ದಾರೆ. ಒಟ್ಟಾರೆಯಾಗಿ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಈ ಬಜೆಟ್ ಪೂರಕ’ ಎಂದರು.