<p><strong>ನವದೆಹಲಿ:</strong> ಪಂಜಾಬ್ ನ್ಯಾಷನಲ್ ಬ್ಯಾಂಕ್ಗೆ ₹11,344 ಕೋಟಿ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈರ್ ಸ್ಟಾರ್ ವಜ್ರಾಭರಣ ಸಂಸ್ಥೆಯ ಹಣಕಾಸು ವಿಭಾಗದ ಅಧ್ಯಕ್ಷ ವಿಪುಲ್ ಅಂಬಾನಿ, ಅವರ ಚಿಕ್ಕಪ್ಪ ಮೇಹುಲ್ ಚೋಕ್ಸಿ ಸೇರಿದಂತೆ ಸಂಸ್ಥೆಯ ಐದು ಮಂದಿ ಅಧಿಕಾರಿಗಳನ್ನು ಮಂಗಳವಾರ ಬಂಧಿಸಲಾಗಿದೆ.</p>.<p>ಈ ಮೂಲಕ, ಪ್ರಸ್ತುತ ಪ್ರಕರಣದಲ್ಲಿ ಒಟ್ಟು 11 ಮಂದಿಯನ್ನು ಬಂಧಿಸಿದಂತಾಗಿದೆ. ಮೂವರು ಅಧಿಕಾರಿಗಳನ್ನು ಕಳೆದ ವಾರ ಹಾಗೂ ಮತ್ತೆ ಮೂವರನ್ನು ಸೋಮವಾರ ಬಂಧಿಸಲಾಗಿತ್ತು. ಈ ಪೈಕಿ ಮೂವರು, ಪ್ರಕರಣದ ಪ್ರಮುಖ ಆರೋಪಿ ಉದ್ಯಮಿ ನೀರವ್ ಮೋದಿ ಅವರ ಕಂಪನಿ ಜೊತೆ ಸಂಪರ್ಕ ಹೊಂದಿದ್ದು, ಮತ್ತೆ ಮೂವರು ಚೋಕ್ಸಿಯವರ ಗೀತಾಂಜಲಿ ಗ್ರೂಪ್ ಕಂಪನಿಗೆ ಸೇರಿದವರಾಗಿದ್ದಾರೆ.</p>.<p>ಗೀಜಾಂಜಲಿ ಗ್ರೂಪ್ನ ಹಣಕಾಸು ವಿಭಾಗದ ಮುಖ್ಯಸ್ಥ ಕಪಿಲ್ ಖಂಡೇಲ್ವಾಲ್ ಮತ್ತು ವ್ಯವಸ್ಥಾಪಕ ನಿತೀನ್ ಶಾಹಿ ಅವರನ್ನು ಸಿಬಿಐ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದೆ.</p>.<p>ಹೊಸ ಪ್ರಕರಣ ದಾಖಲು: ಈ ಮಧ್ಯೆ, ನೀರವ್ ಮೋದಿ ಅವರ ವಿರುದ್ಧ ಆದಾಯ ತೆರಿಗೆ ಇಲಾಖೆಯು ಕಪ್ಪು ಹಣ ನಿಗ್ರಹ ಕಾನೂನಿನ ಅಡಿ ಹೊಸ ಕೇಸನ್ನು ದಾಖಲು ಮಾಡಿದೆ. ಆದಾಯಕ್ಕಿಂತ ಅಧಿಕ ಹಣವನ್ನು ಸಂಗ್ರಹಿಸಿರುವ ಆರೋಪದ ಅಡಿ ಈ ಕೇಸು ದಾಖಲಾಗಿದೆ ಎಂದು ಮೂಲಗಳು ತಿಳಿಸಿವೆ.</p>.<p>ಈ ಕುರಿತಾದ ಅರ್ಜಿಯ ವಿಚಾರಣೆಯನ್ನು ಮುಂಬೈ ವಿಶೇಷ ನ್ಯಾಯಾಲಯವು ಇದೇ 27ರಂದು ನಡೆಸಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪಂಜಾಬ್ ನ್ಯಾಷನಲ್ ಬ್ಯಾಂಕ್ಗೆ ₹11,344 ಕೋಟಿ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈರ್ ಸ್ಟಾರ್ ವಜ್ರಾಭರಣ ಸಂಸ್ಥೆಯ ಹಣಕಾಸು ವಿಭಾಗದ ಅಧ್ಯಕ್ಷ ವಿಪುಲ್ ಅಂಬಾನಿ, ಅವರ ಚಿಕ್ಕಪ್ಪ ಮೇಹುಲ್ ಚೋಕ್ಸಿ ಸೇರಿದಂತೆ ಸಂಸ್ಥೆಯ ಐದು ಮಂದಿ ಅಧಿಕಾರಿಗಳನ್ನು ಮಂಗಳವಾರ ಬಂಧಿಸಲಾಗಿದೆ.</p>.<p>ಈ ಮೂಲಕ, ಪ್ರಸ್ತುತ ಪ್ರಕರಣದಲ್ಲಿ ಒಟ್ಟು 11 ಮಂದಿಯನ್ನು ಬಂಧಿಸಿದಂತಾಗಿದೆ. ಮೂವರು ಅಧಿಕಾರಿಗಳನ್ನು ಕಳೆದ ವಾರ ಹಾಗೂ ಮತ್ತೆ ಮೂವರನ್ನು ಸೋಮವಾರ ಬಂಧಿಸಲಾಗಿತ್ತು. ಈ ಪೈಕಿ ಮೂವರು, ಪ್ರಕರಣದ ಪ್ರಮುಖ ಆರೋಪಿ ಉದ್ಯಮಿ ನೀರವ್ ಮೋದಿ ಅವರ ಕಂಪನಿ ಜೊತೆ ಸಂಪರ್ಕ ಹೊಂದಿದ್ದು, ಮತ್ತೆ ಮೂವರು ಚೋಕ್ಸಿಯವರ ಗೀತಾಂಜಲಿ ಗ್ರೂಪ್ ಕಂಪನಿಗೆ ಸೇರಿದವರಾಗಿದ್ದಾರೆ.</p>.<p>ಗೀಜಾಂಜಲಿ ಗ್ರೂಪ್ನ ಹಣಕಾಸು ವಿಭಾಗದ ಮುಖ್ಯಸ್ಥ ಕಪಿಲ್ ಖಂಡೇಲ್ವಾಲ್ ಮತ್ತು ವ್ಯವಸ್ಥಾಪಕ ನಿತೀನ್ ಶಾಹಿ ಅವರನ್ನು ಸಿಬಿಐ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದೆ.</p>.<p>ಹೊಸ ಪ್ರಕರಣ ದಾಖಲು: ಈ ಮಧ್ಯೆ, ನೀರವ್ ಮೋದಿ ಅವರ ವಿರುದ್ಧ ಆದಾಯ ತೆರಿಗೆ ಇಲಾಖೆಯು ಕಪ್ಪು ಹಣ ನಿಗ್ರಹ ಕಾನೂನಿನ ಅಡಿ ಹೊಸ ಕೇಸನ್ನು ದಾಖಲು ಮಾಡಿದೆ. ಆದಾಯಕ್ಕಿಂತ ಅಧಿಕ ಹಣವನ್ನು ಸಂಗ್ರಹಿಸಿರುವ ಆರೋಪದ ಅಡಿ ಈ ಕೇಸು ದಾಖಲಾಗಿದೆ ಎಂದು ಮೂಲಗಳು ತಿಳಿಸಿವೆ.</p>.<p>ಈ ಕುರಿತಾದ ಅರ್ಜಿಯ ವಿಚಾರಣೆಯನ್ನು ಮುಂಬೈ ವಿಶೇಷ ನ್ಯಾಯಾಲಯವು ಇದೇ 27ರಂದು ನಡೆಸಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>