ಮತ್ತೂರು, ಪಿಳ್ಳಹಳ್ಳಿ, ಹೊನ್ನಸಂದ್ರ ಮತ್ತು ವಡೇರಹಳ್ಳಿ ವ್ಯಾಪ್ತಿಯ 64 ಎಕರೆ ಭೂಮಿಯನ್ನು ಕೃಷಿ ಉತ್ಪನ್ನ ಮಾರುಕಟ್ಟೆಗೆ 2008ರಲ್ಲಿ ನೀಡಲಾಗಿದೆ. ಮಾರುಕಟ್ಟೆಯನ್ನು ನಿರ್ಮಿಸಿ ಮಳಿಗೆಗಳನ್ನು ಹಂಚಿಕೆ ಮಾಡಲಾಗಿದೆ. ಈರುಳ್ಳಿ, ಬೆಳುಳ್ಳಿ ಹಾಗೂ ಆಲೂಗಡ್ಡೆಯನ್ನು ಹೆಚ್ಚಿನ ಪ್ರಮಾಣದಲ್ಲಿ ಮಾರಾಟ ಮಾಡಲಾಗುತ್ತದೆ. ಪ್ರತಿದಿನ ಲಕ್ಷಾಂತರ ರೂಪಾಯಿ ವಹಿವಾಟು ನಡೆಯುತ್ತದೆ. ತೆರಿಗೆ ಪಾವತಿಸುವಂತೆ ಸಮಿತಿಗೆ ನೋಟಿಸ್ ನೀಡಲಾಗಿತ್ತು. ಆದರೆ, ಅದಕ್ಕೆ ಯಾವುದೇ ಉತ್ತರ ನೀಡಿಲ್ಲ ಎಂದು ಆರೋಪಿಸಿದರು.