ಪಶ್ಚಿಮಘಟ್ಟದ ಅರಣ್ಯ ಉಳಿಸಲು ಖಾಲಿ ಇರುವ ಹುದ್ದೆಗಳನ್ನು ಆದ್ಯತೆ ಮೇಲೆ ಭರ್ತಿ ಮಾಡಲೇಬೇಕಾದ ಜವಾಬ್ದಾರಿ ಇದೆ. ಖಾಲಿ ಇರುವ 143 ಉಪ ವಲಯ ಅರಣ್ಯಾಧಿಕಾರಿ ಮತ್ತು 119 ಅರಣ್ಯ ರಕ್ಷಕ ಸೇರಿ ಒಟ್ಟು 262 ಹುದ್ದೆಗಳನ್ನು ಈ ವರ್ಷವೇ ಭರ್ತಿ ಮಾಡಲು ಸರ್ಕಾರ ಅನುಮತಿ ಕೊಟ್ಟಿದೆ. ಇದರಲ್ಲಿ ಬಂಡಿಪುರ ಮತ್ತು ನಾಗರಹೊಳೆ ರಾಷ್ಟ್ರೀಯ ಉದ್ಯಾನಗಳಿಗೆ ಆದ್ಯತೆ ಮೇಲೆ ಹುದ್ದೆ ಭರ್ತಿ ಮಾಡಲಾಗುವುದು ಎಂದರು.