ಬುಧವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘50ಕ್ಕೂ ಹೆಚ್ಚು ಜಾತಿಯ ಮರಗಳನ್ನು ಅನುಮತಿ ಪಡೆಯದೆ ರೈತರ ಭೂಮಿಯಲ್ಲಿ ಕಡಿಯುವುದಕ್ಕೆ ವಿನಾಯಿತಿ ನೀಡುವ ಉದ್ದೇಶದಿಂದ ಈ ಮಸೂದೆ ಮಂಡಿಸಲಾಗಿದೆ. ಈ ತಿದ್ದುಪಡಿ ಕಾಯ್ದೆ ಅವೈಜ್ಞಾನಿಕವಾಗಿದೆ. ಪ್ರತಿಯೊಂದು ಪ್ರಭೇದದ ಮರಗಳೂ ಒಂದೊಂದು ರೀತಿಯ ಮಹತ್ವ ಹೊಂದಿವೆ. ಈ ಕಾಯ್ದೆ ಜಾರಿಗೆ ಬಂದರೆ ‘ಕರ್ನಾಟಕ ಮರಗಳ ಸಂರಕ್ಷಣೆ ಕಾಯ್ದೆ 1976’ಕ್ಕೆ ಚ್ಯುತಿ ಉಂಟಾಗುತ್ತದೆ. ಚುನಾವಣೆ ಹತ್ತಿರವಿರುವುದರಿಂದ ಅಕ್ರಮ ಹಣ ಸಂಗ್ರಹಿಸಲು ಮಾಡಿರುವ ಹುನ್ನಾರ’ ಎಂದು ಆರೋಪಿಸಿದರು.