‘ಈ ಹಿಂದಿನ ರಾಜ್ಯ ಸರ್ಕಾರವು ನಾಗಮೋಹನ ದಾಸ್ ಸಮಿತಿ ರಚನೆ ಮಾಡುವ ಮೂಲಕ ಸುಪ್ರೀಂ ಕೋರ್ಟ್ಗೆ ನೀಡಿದ ವಾಗ್ದಾನಕ್ಕೆ ವಿರುದ್ಧವಾಗಿ ನಡೆದುಕೊಂಡಿದೆ. ಅಂತೆಯೇ ಸಮಿತಿಯು, ವ್ಯಾಜ್ಯದಲ್ಲಿ ಹಿತಾಸಕ್ತಿ ಹೊಂದಿರುವವರ ವಾದ, ಆಕ್ಷೇಪಣೆ ಅಭಿಪ್ರಾಯ ಆಲಿಸದೆ ತೀರ್ಮಾನ ಕೈಗೊಂಡು ವ್ಯತಿರಿಕ್ತ ವರದಿ ಸಲ್ಲಿಸಿದೆ’ ಎಂಬುದು ಅರ್ಜಿದಾರರ ವಾದ.