<p><strong>ನವದೆಹಲಿ</strong>: ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್ಬಿ) ಬಹುಕೋಟಿ ಹಗರಣದಲ್ಲಿ ಸಿಬಿಐ ಮಂಗಳವಾರ ತಡರಾತ್ರಿ ಬ್ಯಾಂಕ್ ಜನರಲ್ ಮ್ಯಾನೇಜರ್ ರಾಜೇಶ್ ಜಿಂದಾಲ್ ಅವರನ್ನು ಬಂಧಿಸಿದೆ.</p>.<p>ಇದರೊಂದಿಗೆ ಬಂಧಿತ ಬ್ಯಾಂಕ್ ಅಧಿಕಾರಿಗಳ ಸಂಖ್ಯೆ ಆರಕ್ಕೆ ಏರಿದಂತಾಗಿದೆ.</p>.<p>ವಜ್ರಾಭರಣ ಉದ್ಯಮಿ ನೀರವ್ ಮೋದಿ–ಮೆಹುಲ್ ಚೋಕ್ಸಿ ಒಡೆತನದ ಕಂಪನಿಗಳ ಆರು ಅಧಿಕಾರಿಗಳು ಸೇರಿದಂತೆ ಪ್ರಕರಣದಲ್ಲಿ ಇದುವರೆಗೂ ಸಿಬಿಐ ಒಟ್ಟು 12 ಜನರನ್ನು ಬಂಧಿಸಿದೆ.</p>.<p>ಸದ್ಯ ದೆಹಲಿಯ ಪಿಎನ್ಬಿ ಬ್ಯಾಂಕ್ ಪ್ರಧಾನ ಕಚೇರಿಯಲ್ಲಿರುವ ಜಿಂದಾಲ್ ಈ ಹಿಂದೆ ಮುಂಬೈನ ಬ್ರಾಡಿ ಹೌಸ್ ಶಾಖೆಯ ಮುಖ್ಯಸ್ಥರಾಗಿದ್ದರು.</p>.<p>ಜಿಂದಾಲ್ ಮುಖ್ಯಸ್ಥರಾಗಿದ್ದ 2009ರಿಂದ 2011ರ ಅವಧಿಯಲ್ಲಿ ನೀರವ್ ಮೋದಿ ಕಂಪನಿಗಳಿಗೆ ಬೇಕಾಬಿಟ್ಟಿ ಸಾಲಖಾತ್ರಿ ಪತ್ರ ನೀಡಿದ್ದರು ಎಂದು ಸಿಬಿಐ ವಕ್ತಾರರು ಬುಧವಾರ ತಿಳಿಸಿದ್ದಾರೆ.</p>.<p>ಹಗರಣದ ಪ್ರಮುಖ ಆರೋಪಿ ಗೋಕುಲನಾಥ್ ಶೆಟ್ಟಿ ಸೇರಿದಂತೆ ಬಂಧಿತ ಅಧಿಕಾರಿಗಳೆಲ್ಲ ಮುಂಬೈನ ಬ್ರಾಡಿ ಹೌಸ್ ಶಾಖೆಯಲ್ಲಿ ಕೆಲಸ ಮಾಡುತ್ತಿದ್ದರು. ಇದೇ ಶಾಖೆಯಲ್ಲಿ ನೀರವ್ ಅಪಾರ ಮೊತ್ತದ ಸಾಲ ಪಡೆದಿದ್ದಾರೆ.</p>.<p>ಇದೇ ಪ್ರಕರಣದ ಸಂಬಂಧ ಸಿಬಿಐ ಅಧಿಕಾರಿಗಳು ಮುಂಬೈನಲ್ಲಿ ಮಂಗಳವಾರ ರಾತ್ರಿ ನೀರವ್ ಮೋದಿಯ ಫೈರ್ ಸ್ಟಾರ್ ವಜ್ರಾಭರಣ ಸಂಸ್ಥೆಯ ಹಣಕಾಸು ವಿಭಾಗದ ಉಪಾಧ್ಯಕ್ಷ ಕಂಪನಿಯ ವಿಪುಲ್ ಅಂಬಾನಿ ಸೇರಿದಂತೆ ಮೂವರನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿತ್ತು.</p>.<p>ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬುಧವಾರ ನೀರವ್ ಮೋದಿ ಕಂಪನಿಯ ಸುಮಾರು ₹145 ಕೋಟಿ ಮೊತ್ತದ 141 ಬ್ಯಾಂಕ್ ಖಾತೆ ಮತ್ತು ನಿಶ್ಚಿತ ಠೇವಣಿಗಳನ್ನು (ಎಫ್.ಡಿ) ಮುಟ್ಟುಗೋಲು ಹಾಕಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್ಬಿ) ಬಹುಕೋಟಿ ಹಗರಣದಲ್ಲಿ ಸಿಬಿಐ ಮಂಗಳವಾರ ತಡರಾತ್ರಿ ಬ್ಯಾಂಕ್ ಜನರಲ್ ಮ್ಯಾನೇಜರ್ ರಾಜೇಶ್ ಜಿಂದಾಲ್ ಅವರನ್ನು ಬಂಧಿಸಿದೆ.</p>.<p>ಇದರೊಂದಿಗೆ ಬಂಧಿತ ಬ್ಯಾಂಕ್ ಅಧಿಕಾರಿಗಳ ಸಂಖ್ಯೆ ಆರಕ್ಕೆ ಏರಿದಂತಾಗಿದೆ.</p>.<p>ವಜ್ರಾಭರಣ ಉದ್ಯಮಿ ನೀರವ್ ಮೋದಿ–ಮೆಹುಲ್ ಚೋಕ್ಸಿ ಒಡೆತನದ ಕಂಪನಿಗಳ ಆರು ಅಧಿಕಾರಿಗಳು ಸೇರಿದಂತೆ ಪ್ರಕರಣದಲ್ಲಿ ಇದುವರೆಗೂ ಸಿಬಿಐ ಒಟ್ಟು 12 ಜನರನ್ನು ಬಂಧಿಸಿದೆ.</p>.<p>ಸದ್ಯ ದೆಹಲಿಯ ಪಿಎನ್ಬಿ ಬ್ಯಾಂಕ್ ಪ್ರಧಾನ ಕಚೇರಿಯಲ್ಲಿರುವ ಜಿಂದಾಲ್ ಈ ಹಿಂದೆ ಮುಂಬೈನ ಬ್ರಾಡಿ ಹೌಸ್ ಶಾಖೆಯ ಮುಖ್ಯಸ್ಥರಾಗಿದ್ದರು.</p>.<p>ಜಿಂದಾಲ್ ಮುಖ್ಯಸ್ಥರಾಗಿದ್ದ 2009ರಿಂದ 2011ರ ಅವಧಿಯಲ್ಲಿ ನೀರವ್ ಮೋದಿ ಕಂಪನಿಗಳಿಗೆ ಬೇಕಾಬಿಟ್ಟಿ ಸಾಲಖಾತ್ರಿ ಪತ್ರ ನೀಡಿದ್ದರು ಎಂದು ಸಿಬಿಐ ವಕ್ತಾರರು ಬುಧವಾರ ತಿಳಿಸಿದ್ದಾರೆ.</p>.<p>ಹಗರಣದ ಪ್ರಮುಖ ಆರೋಪಿ ಗೋಕುಲನಾಥ್ ಶೆಟ್ಟಿ ಸೇರಿದಂತೆ ಬಂಧಿತ ಅಧಿಕಾರಿಗಳೆಲ್ಲ ಮುಂಬೈನ ಬ್ರಾಡಿ ಹೌಸ್ ಶಾಖೆಯಲ್ಲಿ ಕೆಲಸ ಮಾಡುತ್ತಿದ್ದರು. ಇದೇ ಶಾಖೆಯಲ್ಲಿ ನೀರವ್ ಅಪಾರ ಮೊತ್ತದ ಸಾಲ ಪಡೆದಿದ್ದಾರೆ.</p>.<p>ಇದೇ ಪ್ರಕರಣದ ಸಂಬಂಧ ಸಿಬಿಐ ಅಧಿಕಾರಿಗಳು ಮುಂಬೈನಲ್ಲಿ ಮಂಗಳವಾರ ರಾತ್ರಿ ನೀರವ್ ಮೋದಿಯ ಫೈರ್ ಸ್ಟಾರ್ ವಜ್ರಾಭರಣ ಸಂಸ್ಥೆಯ ಹಣಕಾಸು ವಿಭಾಗದ ಉಪಾಧ್ಯಕ್ಷ ಕಂಪನಿಯ ವಿಪುಲ್ ಅಂಬಾನಿ ಸೇರಿದಂತೆ ಮೂವರನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿತ್ತು.</p>.<p>ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬುಧವಾರ ನೀರವ್ ಮೋದಿ ಕಂಪನಿಯ ಸುಮಾರು ₹145 ಕೋಟಿ ಮೊತ್ತದ 141 ಬ್ಯಾಂಕ್ ಖಾತೆ ಮತ್ತು ನಿಶ್ಚಿತ ಠೇವಣಿಗಳನ್ನು (ಎಫ್.ಡಿ) ಮುಟ್ಟುಗೋಲು ಹಾಕಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>