ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಬೊಗಸೆ ಮಣ್ಣು ಹಿಡಿದು ಸಾವಿರಾರು ರೈತ ಹೋರಾಟಗಾರರು ಬರಲಿದ್ದಾರೆ. ಸ್ವರಾಜ್ ಇಂಡಿಯಾ ಪಕ್ಷದ ಅಧ್ಯಕ್ಷ ಯೋಗೇಂದ್ರ ಯಾದವ್, ಉತ್ತರ ಭಾರತದ ರೈತ ನಾಯಕ ರಾಕೇಶ್ ಟಿಕಾಯಿತ್ ಪಾಲ್ಗೊಳ್ಳಲಿದ್ದಾರೆ. ಫೆ. 28ರಂದು ‘ತಿಥಿಬಿಡಿ ಸಸಿನೆಡಿ’ ಕಾರ್ಯಕ್ರಮ ಹಾಗೂ ನಾಟಕ ಪ್ರದರ್ಶನದ ಮೂಲಕ ಶ್ರದ್ಧಾಂಜಲಿ ಅರ್ಪಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.