ದೇವಾಲಯ ಸುತ್ತಮುತ್ತ ಆಟಿಕೆ ಸಾಮಾಗ್ರಿ, ತಿಂಡಿತಿನಿಸುಗಳ ಅಂಗಡಿಗಳು ಜಾತ್ರೆ ಕಳೆತಂದಿದ್ದರೆ, ಪರ ಊರುಗಳಿಂದಲೂ ಬಂಧುಗಳು ಬಂದಿದ್ದರಿಂದ ಹಬ್ಬಕ್ಕೆ ಮತ್ತಷ್ಟು ಕಳೆ ಬಂದಿತ್ತು. ಅನೇಕ ಬಡಾವಣೆ, ಬೀದಿಗಳ ತಮ್ಮ ತಮ್ಮ ಮನೆಗಳಲ್ಲಿ ಶಾಮಿಯಾನ ವ್ಯವಸ್ಥೆ ಮಾಡಿಕೊಂಡು ಹಬ್ಬದ ಅಡುಗೆ ತಯಾರಿಸಿ, ಊಟದ ವ್ಯವಸ್ಥೆ ಮಾಡಿದ್ದರು. ದೇವಸ್ಥಾನದ ಆವರಣದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಲಾಗಿತ್ತು. ಸಂಚಾರಿ ಶೌಚಾಲಯ, ಬೇವಿನ ಉಡುಗೆ ಧರಿಸಿದ್ದವರಿಗೆ ಸ್ನಾನದ ವ್ಯವಸ್ಥೆ, ಭಕ್ತರಿಗೆ ಪ್ರಸಾದದ ವ್ಯವಸ್ಥೆಯನ್ನು ದೇವಸ್ಥಾನ ಕಮಿಟಿ ಯಿಂದ ಮಾಡಲಾಗಿತ್ತು. ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುಂಜಾಗ್ರತವಾಗಿ ಕ್ರಮ ಕೈಗೊಂಡಿದ್ದರು.