‘ಪಕ್ಷದ ಆಂತರಿಕ ಒಪ್ಪಂದದಂತೆ ಚೈತ್ರಶ್ರೀ ಅವರು 20 ತಿಂಗಳು ಮುಗಿದ ನಂತರ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕಿತ್ತು. ಅವರು, ಒಪ್ಪಂದವನ್ನು ಉಲ್ಲಂಘಿಸಿದ್ದಾರೆ, ಪಕ್ಷದ ಮುಖಂಡರ ಸೂಚನೆಯನ್ನು ಪಾಲಿಸಿಲ್ಲ. ಹೀಗಾಗಿ, ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ’ ಎಂದು ಬಿಜೆಪಿ ಸದಸ್ಯರೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.