ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರೋಪಿ ಶಾಸಕರು 14ದಿನಗಳ ನ್ಯಾಯಾಂಗ ಬಂಧನಕ್ಕೆ

Last Updated 22 ಫೆಬ್ರುವರಿ 2018, 19:30 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್‌ ಅವರ ಮೇಲೆ ಹಲ್ಲೆ ನಡೆಸಿರುವ ಆರೋಪ ಹೊತ್ತ ಶಾಸಕರಾದ ಪ್ರಕಾಶ್‌ ಜರ್ವಾಲ್‌ ಹಾಗೂ  ಅಮಾನತ್‌ ಉಲ್ಲಾ ಖಾನ್‌ ಅವರನ್ನು 14 ದಿನಗಳು ನ್ಯಾಯಾಂಗ ಬಂಧನದಲ್ಲಿ ಇರಿಸುವಂತೆ ದೆಹಲಿ ಕೋರ್ಟ್‌ ಆದೇಶಿಸಿದೆ. ಇಬ್ಬರನ್ನೂ ತಿಹಾರ್‌ ಜೈಲಿಗೆ ಕಳುಹಿಸಲಾಗಿದೆ.

ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ನಿವಾಸದಲ್ಲಿ ಇದೇ 19ರ ರಾತ್ರಿ ಹಲ್ಲೆ ನಡೆಸಿರುವ ಆರೋಪ ಇವರ ಮೇಲಿದೆ. ಇವರ ಜಾಮೀನು ಕುರಿತಾದ ಅರ್ಜಿಯ ವಿಚಾರಣೆಯನ್ನು ಕೋರ್ಟ್‌ ಶುಕ್ರವಾರ ನಡೆಸಲಿದೆ.

ಬುಧವಾರ ಆರೋಪಿಗಳನ್ನು ಮ್ಯಾಜಿಸ್ಟ್ರೇಟ್‌ ಮುಂದೆ ಹಾಜರು ಪಡಿಸಿದ್ದಾಗ ಒಂದು ದಿನದ ನ್ಯಾಯಾಂಗ ಬಂಧನ ವಿಧಿಸಿ ಆದೇಶಿದ್ದರು. ಪೊಲೀಸ್‌ ಠಾಣೆಯಲ್ಲಿಯೇ ಇಟ್ಟುಕೊಂಡು ವಿಚಾರಣೆ ನಡೆಸುವುದಾಗಿ ಪೊಲೀಸರು ಮಾಡಿಕೊಂಡ ಮನವಿಯನ್ನು ಕೋರ್ಟ್‌ ತಿರಸ್ಕರಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT