ಬೆಂಗಳೂರು: ಬೃಹತ್ ಬೆಂಗಳೂರು ಹೋಟೆಲ್ಗಳ ಸಂಘದ ವತಿಯಿಂದ ಇದೇ 24ರಂದು ಬೆಳಿಗ್ಗೆ 10ಕ್ಕೆ ಜ್ಞಾನಜ್ಯೋತಿ ಸಭಾಂಗಣದಲ್ಲಿ ‘82ನೇ ವಾರ್ಷಿಕ ಸರ್ವಸದಸ್ಯರ ಸಭೆ’ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಬಿ. ಚಂದ್ರಶೇಖರ ಹೆಬ್ಬಾರ್ ತಿಳಿಸಿದರು.
ಗುರುವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘60 ವರ್ಷಗಳಿಗೂ ಹೆಚ್ಚು ಕಾಲ ಉದ್ಯಮ ನಡೆಸಿದ ಐವರು ಹೋಟೆಲ್ ಉದ್ಯಮಿಗಳಿಗೆ ಆತಿಥ್ಯೋದ್ಯಮ ಪ್ರಶಸ್ತಿ ನೀಡಲಾಗುವುದು ಜತೆಗೆ, ಇಬ್ಬರು ಯುವ ಉದ್ಯಮಿಗಳಿಗೆ ಉದ್ಯಮಶ್ರೀ ಪ್ರಶಸ್ತಿ ನೀಡಲಾಗುವುದು’ ಎಂದು ಅವರು ಹೇಳಿದರು.
‘ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿಶೇ 85ಕ್ಕಿಂತ ಹೆಚ್ಚು ಅಂಕ ಗಳಿಸಿದ ಹೋಟೆಲ್ ಕಾರ್ಮಿಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು’ ಎಂದರು.
‘ಕಾರ್ಯಕ್ರಮವನ್ನು ಕೇಂದ್ರ ಸಚಿವ ಅನಂತ ಕುಮಾರ್ ಉದ್ಘಾಟಿಸಲಿದ್ದಾರೆ’ ಎಂದು ತಿಳಿಸಿದರು.