ಆರೋಪಿಯನ್ನು ವಿಚಾರಣೆಯ ಸಂದರ್ಭದಲ್ಲಿ ಬಂಧಿಸಲಾಗಿಲ್ಲ. ಅದಲ್ಲದೆ, ಆರೋಪಿಯು ಸ್ವತಃ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಹಾಗಾಗಿ ನ್ಯಾಯಾಧೀಶರು ಆರೋಪಿಯನ್ನು ಜಾಮೀನಿನಲ್ಲಿ ಬಿಡುಗಡೆ ಮಾಡಲೇಬೇಕು ಎಂದು ತಮ್ಮ ಕಕ್ಷಿದಾರರೊಬ್ಬರ ಪರವಾಗಿ ಹಿರಿಯ ವಕೀಲ ಮುಕುಲ್ ರೋಹಟಗಿ ಅರ್ಜಿ ಸಲ್ಲಿಸಿದ್ದರು. ಆದರೆ ಈ ಅರ್ಜಿಯ ವಿಚಾರಣೆ ನಡೆಸಲು ಪೀಠ ಒಪ್ಪಲಿಲ್ಲ.