ಪ್ರಧಾನಿ, ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ, ಲೋಕಸಭೆಯ ಸ್ಪೀಕರ್ ಮತ್ತು ಲೋಕಸಭೆಯ ಅತ್ಯಂತ ದೊಡ್ಡ ವಿರೋಧ ಪಕ್ಷದ ನಾಯಕರನ್ನು ಒಳಗೊಂಡ ಆಯ್ಕೆ ಸಮಿತಿಯು ಸಭೆ ಸೇರಲಿದೆ ಎಂದು ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ಅವರು ನ್ಯಾಯಮೂರ್ತಿಗಳಾದ ರಂಜನ್ ಗೊಗೊಯ್ ಮತ್ತು ಆರ್. ಭಾನುಮತಿ ಅವರ ಪೀಠಕ್ಕೆ ತಿಳಿಸಿದ್ದಾರೆ.