ಮಡಿಕೇರಿ: ತಾಲ್ಲೂಕಿನ ಕಾಲೂರು ಗ್ರಾಮದಲ್ಲಿ ಶುಕ್ರವಾರ ಪಕ್ಕದ ಮನೆಯ ಮಹಿಳೆಗೆ ವ್ಯಕ್ತಿಯೊಬ್ಬರು ಗುಂಡಿಟ್ಟು ಕೊಂದು, ತಾವೂ ಅದೇ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಲಲಿತಮ್ಮ (40) ಸ್ಥಳದಲ್ಲೇ ಸತ್ತರೆ, ಗುಂಡು ಹಾರಿಸಿದ ಧರ್ಮರಾಜ್ (45) ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಹಿಳೆಯ ಮೇಲೆ ಗುಂಡು ಹಾರಿಸಿದ್ದಾರೆ. ತಾವೂ ಹಣೆಯಭಾಗಕ್ಕೆ ಗುಂಡು ಹೊಡೆದುಕೊಂಡಿದ್ದರಿಂದ ತಲೆ ಸಂಪೂರ್ಣ ಛಿದ್ರವಾಗಿತ್ತು. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈಚೆಗೆ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಮೂವರು ಬಲಿಯಾದ ಬೆನ್ನಲ್ಲೇ ಈ ಘಟನೆ ನಡೆದಿದೆ.