‘ಹೊರಗಿನಿಂದ ನಮ್ಮಲ್ಲಿಗೆ ಉದ್ಯೋಗ ಅರಸಿ ಬಂದವರು ಕನ್ನಡದ ಅವನತಿಗೆ ಕಾರಣವಾಗುತ್ತಿದ್ದಾರೆ. ಹೊರರಾಜ್ಯದ ಕೆಲವು ಅಧಿಕಾರಿಗಳು ತಮ್ಮ ರಾಜ್ಯದವರಿಗೆ ಉದ್ಯೋಗ ಒದಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ಕೆಪಿಟಿಸಿಎಲ್ನ ನೇಮಕಾತಿಯಲ್ಲಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ. ಬ್ಯಾಂಕ್ ಹುದ್ದೆಗಳು ಕನ್ನಡಿಗರ ಕೈತಪ್ಪುತ್ತಿವೆ. ನಾನು ವಲಸೆ ವಿರೋಧಿಯಲ್ಲ. ಆದರೆ, ಅದಕ್ಕೂ ಮಿತಿ ಇರುತ್ತದೆ’ ಎಂದರು.