ಎಚ್.ಡಿ.ಕೋಟೆ: ನಾಗರಹೊಳೆ ಹುಲಿ ರಕ್ಷಿತಾರಣ್ಯದ ಬಳ್ಳೆ ಶಿಬಿರದಲ್ಲಿ ಶನಿವಾರ ಒಂಟಿ ಸಲಗದ ದಾಳಿಯಿಂದ ಹುಲಿ ಯೋಜನೆ ನಿರ್ದೇಶಕ ಮಣಿಕಂಠನ್ ಅವರು ಮೃತಪಟ್ಟಿದ್ದಾರೆ.
ಎಚ್.ಡಿ.ಕೋಟೆ ತಾಲ್ಲೂಕು ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಭಾಸ್ಕರ್ ಈ ವಿಷಯ ತಿಳಿಸಿದ್ದಾರೆ.
ಮಧ್ಯಾಹ್ನ 12.45ರ ಹೊತ್ತಿಗೆ ಬಳ್ಳೆ ವಲಯದಲ್ಲಿ ಸಿಬ್ಬಂದಿಯೊಂದಿಗೆ ಜೀಪಿನಲ್ಲಿ ತೆರಳುತ್ತಿದ್ದಾಗ ಆನೆ ದಾಳಿ ನಡೆಸಿದೆ. ಸಿಬ್ಬಂದಿ ಗುಂಡು ಹಾರಿಸಲು ಸಿದ್ಧತೆ ನಡೆಸುತ್ತಿರುವಷ್ಟರಲ್ಲಿ ಮಣಿಕಂಠನ್ ಅವರ ಎದೆಭಾಗ ಹಾಗೂ ತಲೆ ಭಾಗವನ್ನು ಸಲಗ ತುಳಿದು ಹಾಕಿತು ಎನ್ನಲಾಗಿದೆ.