ಭದ್ರತಾ ಸಮಿತಿಯಲ್ಲಿ ನ್ಯಾಯಮೂರ್ತಿ ಎಲ್.ನಾರಾಯಣ ಸ್ವಾಮಿ ಮತ್ತು ನ್ಯಾಯಮೂರ್ತಿ ರವಿ ಮಳೀಮಠ ಇದ್ದಾರೆ. ಹಾಗೆಯೇ, ಆಡಳಿತ ವಿಭಾಗದ ರಿಜಿಸ್ಟ್ರಾರ್ ಸಮಿತಿಯಲ್ಲಿ ಪ್ರೆಸೆಂಟಿಂಗ್ ಆಫೀಸರ್ ಆಗಿದ್ದಾರೆ. ಈ ಸಮಿತಿಯು ಹೈಕೋರ್ಟ್ ಪ್ರಧಾನ ಪೀಠ, ಧಾರವಾಡ ಮತ್ತು ಕಲಬುರಗಿ ಪೀಠ, ಮುಖ್ಯ ನ್ಯಾಯಮೂರ್ತಿ ಮತ್ತು ನ್ಯಾಯಮೂರ್ತಿಗಳ ನಿವಾಸಗಳ ಭದ್ರತಾ ವ್ಯವಸ್ಥೆ ಪರಿಶೀಲಿಸಲಿದೆ.