ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಿಕ್ ಬ್ಯಾಕ್ ವ್ಯವಹಾರದಲ್ಲಿ ಹೇಗೆ ಹಣ ಹೊಡೆಯಬೇಕು ಎಂಬುದರಲ್ಲಿ ಸಿದ್ದರಾಮಯ್ಯ ಅವರು ಪರಿಣಿತರು. ಅವರು ಇರುವುದೇ ಜನರ ದುಡ್ಡು ಲೂಟಿ ಮಾಡಲು. ಸರ್ಕಾರ ಎಷ್ಟು ಅರ್ಥಿಕ ದಿವಾಳಿಯಾಗಿದೆ ಎಂಬುದಕ್ಕೆ ಅಂಕಿ ಅಂಶಗಳಿವೆ. ಬಿಸಿನೆಸ್ ಲೈನ್ ಇಂಗ್ಲಿಷ್ ಪತ್ರಿಕೆ ಈ ಕುರಿತು ವರದಿ ಮಾಡಿದೆ. ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲ್ಲ. ಹೀಗಾಗಿ ಹೋಗುವಾಗ ಆರ್ಥಿಕ ದಿವಾಳಿ ಮಾಡಿ ಹೋಗುತ್ತಿದ್ದಾರೆ ಎಂದು ಅರೋಪಿಸಿದರು.