ವಿಜಯಪುರ: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪರಾರಿಯಾಗಿದ್ದ ಆರೋಪಿ ಯೂನಸ್ ಪಟೇಲ್ ಎಂಬಾತನ ಬಂಧನಕ್ಕೆ ಖಚಿತ ಮಾಹಿತಿ ಮೇರೆಗೆ ಆತನ ಮನೆ ಮೇಲೆ ಪೊಲೀಸರು ಸೋಮವಾರ ಬೆಳಗಿನ ಜಾವ ದಾಳಿ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ಪಿಎಸ್ಐ ಆರೀಫ್ ಗಾಳಿಯಲ್ಲಿ ಗುಂಡು ಹಾರಿಸಿ ಆರೋಪಿಯನ್ನು ಬೆದರಿಸುವ ಪ್ರಯತ್ನ ನಡೆಸಿದ್ದಾರೆ. ಅಷ್ಟರಲ್ಲಿ ಯೂನಸ್ ಪಟೇಲ್, ಪಿಎಸ್ಐ ಹಾಗೂ ಕಾನ್ಸ್ಟೆಬಲ್ ಮದನಶೆಟ್ಟಿ ಅವರಿಗೆ ಚಾಕುವಿನಿಂದ ಹಿರಿದು ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾನೆ.
ತಕ್ಷಣ ಪಿಎಸ್ಐ ಆರೀಫ್, ಯೂನಿಸ್ ಎಡಕಾಲಿಗೆ ಗುಂಡು ಹಾರಿಸಿದ್ದಾರೆ.
ಘಟನೆಯಲ್ಲಿ ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಸ್ಪಿ ಜೈನ್ ಹೇಳಿಕೆ ನೀಡಿದ್ದಾರೆ.