ಮಾರುವೇಷದ ಕಾರ್ಯಾಚರಣೆಯಲ್ಲಿ ವಾಹಿನಿ ವರದಿಗಾರರು ಕೇಳುವ ಪ್ರಶ್ನೆಗಳಿಗೆ ಸ್ವಾಮೀಜಿ ಉತ್ತರಿಸಿರುವುದನ್ನು ಪ್ರಸಾರ ಮಾಡಲಾಗಿದೆ. ‘ಎಂಟನೇ ವಯಸ್ಸಿಗೆ ಸನ್ಯಾಸ ಕೊಡುತ್ತಾರೆ, ಆಗ ನಮಗೆ ಬುದ್ಧಿ– ಲೋಕಜ್ಞಾನ ಇರುವುದಿಲ್ಲ. ಪ್ರಾಯ ಬಂದ ಮೇಲೆ ಆಸೆ ಬರುವುದು ಸಹಜ. ಮನುಷ್ಯನಿಗೆ ಆಸೆಗಳೆ ಇರಲ್ವ? ಅದನ್ನು ಸಹಿಸಿಕೊಳ್ಳೋದು ಹೇಗೆ. ಅಷ್ಟ ಮಠದ ಎಲ್ಲ ಸ್ವಾಮೀಜಿಗಳಿಗೂ ಮಕ್ಕಳಿದ್ದಾರೆ. ಅದೆಲ್ಲ ಉಡುಪಿ ಜನರಿಗೆ ಗೊತ್ತಿರುವ ವಿಷಯ. ಅದು ಬಯಲಾದರೆ ಉಡುಪಿ ಮರ್ಯಾದೆ ಹೋಗುತ್ತದೆ’ ಎಂದು ಶ್ರೀಗಳು ವಿಡಿಯೊದಲ್ಲಿ ಹೇಳಿದ್ದರು.