ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಗುಲ ಮಠಕ್ಕೆ ನೂತನ ಉತ್ತರಾಧಿಕಾರಿ

Last Updated 15 ಮಾರ್ಚ್ 2018, 10:34 IST
ಅಕ್ಷರ ಗಾತ್ರ

ಕನಕಪುರ: ಕನಕಪುರ ದೇಗುಲಮಠದ ನೂತನ ಉತ್ತರಾಧಿಕಾರಿಯಾಗಿ ಚಾಮರಾಜನಗರ ತಾಲ್ಲೂಕಿನ ಕುಲಗಾಣ ಗ್ರಾಮದ ಕೋಮಲಾಂಭ ಮತ್ತು ಗೌರಿಶಂಕರಸ್ವಾಮಿ ದಂಪತಿಯ ದ್ವಿತೀಯ ಪುತ್ರ ಕೆ.ಜಿ.ಶಶಿಕುಮಾರ್‌ ನೇಮಕಗೊಂಡಿದ್ದಾರೆ.

ಮೈಸೂರಿನ ಜೆ.ಎಸ್‌.ಎಸ್‌. ವಿದ್ಯಾಸಂಸ್ಥೆಯಲ್ಲಿ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿರುವ ಕೆ.ಜಿ.ಶಶಿಕುಮಾರ್‌ ಅವರನ್ನು ದೇಗುಲಮಠದ ಹಿರಿಯ ಶ್ರೀಗಳಾದ ಡಾ.ಮುಮ್ಮಡಿ ನಿರ್ವಾಣಸ್ವಾಮಿಗಳು ಜೆ.ಎಸ್‌.ಎಸ್‌. ಮಹಾಸಂಸ್ಥಾನದ ಪೀಠಾಧಿಕಾರಿ ಸುತ್ತೂರು ಶಿವರಾತ್ರಿ ದೇಶೀಕೇಂದ್ರ ಸ್ವಾಮಿಗಳ ನಿರ್ದೇಶನದಂತೆ ಉತ್ತರಾಧಿಕಾರಿಯಾಗಿ ನೇಮಿಸಿಕೊಳ್ಳುವ ತೀರ್ಮಾನ ಮಾಡಿದ್ದಾರೆ.

ಬುಧವಾರ ಬೆಳಿಗ್ಗೆ ಮೈಸೂರು ಜೆ.ಎಸ್‌.ಎಸ್‌. ವಿದ್ಯಾಸಂಸ್ಥೆಯಲ್ಲಿ ಉತ್ತರಾಧಿಕಾರಿ ಸ್ವೀಕಾರ ಸಮಾರಂಭವು ಜರುಗಿತು. ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮಿ, ಮರಳೇಗವಿ ಮಠದ ಡಾ.ಮುಮ್ಮಡಿ ಶಿವರುದ್ರಸ್ವಾಮಿ, ಮೈಸೂರು ಹೊಸಮಠದ ನಟರಾಜಸ್ವಾಮಿ,
ಬಿಲ್ವಪತ್ರಮಠದ ಶಿವಲಿಂಗಸ್ವಾಮಿ, ವಿಧಾನ ಪರಿಷತ್‌ ಸದಸ್ಯ ವಿ.ಸೋಮಣ್ಣ, ಹರುಗುರ ಚರಮೂರ್ತಿಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT