ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಟ್ಟಿಮನಿಗೆ ಸಿ.ಎಂ ಚಿನ್ನದ ಪದಕ

Last Updated 16 ಮಾರ್ಚ್ 2018, 10:12 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಚಿನ್ನದ ಪದಕ ಗೌರವ ಘೋಷಿಸಲಾಗಿದೆ. ತರಬೇತಿ ಕ್ಷೇತ್ರದಲ್ಲಿ ಧಾರವಾಡ ಗುಂಗರಗಟ್ಟಿ ತರಬೇತಿ ಸಂಸ್ಥೆಯ ಉಪವಲಯ ಅರಣ್ಯಾಧಿಕಾರಿ ಲಕ್ಷ್ಮಣ ಕಟ್ಟಿಮನಿ ಅವರು ಚಿನ್ನದ ಪದಕ ಗೌರವಕ್ಕೆ ಪಾತ್ರರಾಗಿದ್ದಾರೆ.

ವಿಜಯಪುರದ ಇಂಡಿ ತಾಲ್ಲೂಕಿನ ಬರಡೋಲ ಗ್ರಾಮದವರಾದ ಲಕ್ಷ್ಮಣ ಪರಸಪ್ಪ ಕಟ್ಟಿಮನಿ, ಪ್ರಸ್ತುತ ಗುಂಗರಗಟ್ಟಿಯ ರಾಜ್ಯ ಅರಣ್ಯ ಅಕಾಡೆಮಿಯಲ್ಲಿ ಬೋಧಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಅಭಿವೃದ್ಧಿ ಕ್ಷೇತ್ರದಲ್ಲಿ ಧಾರವಾಡ ಸಾಮಾಜಿಕ ಅರಣ್ಯ ವಿಭಾಗದ ವಲಯ ಅರಣ್ಯಾಧಿಕಾರಿ ಬಿ.ಕೆ. ಡಬಾಲಿ, ಅರಣ್ಯ ರಕ್ಷಣೆ ಕ್ಷೇತ್ರದಲ್ಲಿ ಧಾರವಾಡ ವಿಭಾಗದ ಉಪವಲಯ ಅರಣ್ಯಾಧಿಕಾರಿ ಎಂ.ಡಿ. ಲಮಾಣಿ ಅವರೂ ಮುಖ್ಯಮಂತ್ರಿ ಚಿನ್ನದ ಪದಕ ಗೌರವಕ್ಕೆ ಪಾತ್ರರಾಗಿದ್ದಾರೆ.

ಮಾರ್ಚ್‌ 21ರಂದು ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT