ಕೋಟ್ಯಂತರ ರೂಪಾಯಿ ಖರ್ಚುಮಾಡಿ ತುಂಬಾ ಕಟ್ಟಡವನ್ನು ಸುಂದರವಾಗಿ ನಿರ್ಮಿಸಲಾಗಿದೆ. ಆದರೆ, ಗೇಟ್ಗಳ ಅಳವಡಿಕೆ ವೇಳೆ ಎಡವಿದ್ದಾರೆ. ಎಚ್ಚರಿಕೆಯಿಂದ ಸಿಬ್ಬಂದಿ ಕೆಲಸ ಮಾಡಿದ್ದರೆ ಅವಘಡ ಸಂಭವಿಸುತ್ತಿರಲಿಲ್ಲ. ಹೀಗಾಗಿ, ನಿರ್ಲಕ್ಷ್ಯದಿಂದ ಸಾವಿಗೆ ಕಾರಣರಾದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ ಎಂದು ಜಯನಗರ ಪೊಲೀಸರು ಹೇಳಿದರು. ಘಟನೆಯಿಂದ ಎಚ್ಚೆತ್ತ ಬಿಬಿಎಂಪಿ ದಕ್ಷಿಣ ವಲಯದ ಕಂದಾಯ ಅಧಿಕಾರಿಗಳು ಶನಿವಾರ ಬೆಳಿಗ್ಗೆ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದರು.