ನೋಟು ರದ್ದತಿ ಮತ್ತು ಜಿಎಸ್ಟಿಯ ಅನುಷ್ಠಾನದ ಬಗ್ಗೆ ಟೀಕಿಸಿದ ಸಿಂಗ್, ಬಿಜೆಪಿ ನೇತೃತ್ವದ ಸರ್ಕಾರ ಭಾರತದ ಅರ್ಥ ವ್ಯವಸ್ಥೆಯನ್ನೇ ಬುಡಮೇಲು ಮಾಡಿದೆ. ನೋಟು ರದ್ದತಿ ಮತ್ತು ಜಿಎಸ್ಟಿಯನ್ನು ತರಾತುರಿಯಲ್ಲಿ ಅನುಷ್ಠಾನಕ್ಕೆ ತಂದಿದ್ದು ಸಣ್ಣ ಉದ್ಯಮಗಳನ್ನು ನಾಶ ಮಾಡಿತು. ಮೋದಿ ಸರ್ಕಾರ ಕಾಶ್ಮೀರ ವಿವಾದವನ್ನು ಸರಿಯಾಗಿ ನಿಭಾಯಿಸಿಲ್ಲ. ಅಲ್ಲಿನ ಪರಿಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಾ ಹೋಗುತ್ತಿದೆ