ಮರಿಯಮ್ಮನಹಳ್ಳಿ (ಹೊಸಪೇಟೆ ತಾಲ್ಲೂಕು): ‘ಕಲಬುರ್ಗಿ ವಿಮಾನ ನಿಲ್ದಾಣದಿಂದ ಎರಡು–ಮೂರು ತಿಂಗಳಲ್ಲಿ ವಿಮಾನಯಾನ ಸೇವೆ ಆರಂಭವಾಗಲಿದೆ’ ಎಂದು ಬೃಹತ್ ಕೈಗಾರಿಕೆ ಸಚಿವ ಆರ್.ವಿ. ದೇಶಪಾಂಡೆ ತಿಳಿಸಿದರು.
ಸಮೀಪದ ವ್ಯಾಸನಕೆರೆಯಲ್ಲಿ ಸೋಮವಾರ ದಿ.ಸಂಡೂರು ಮ್ಯಾಂಗನೀಸ್ ಅಂಡ್ ಐರನ್ ಓರ್ಸ್ ಲಿಮಿಟೆಡ್ನ ಉಕ್ಕಿನ ಘಟಕ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
‘ಉಡಾನ್ ಯೋಜನೆಯಡಿಯಲ್ಲಿ ಕಲಬುರ್ಗಿ ವಿಮಾನ ನಿಲ್ದಾಣದಿಂದ ಗೋವಾ, ಬಳ್ಳಾರಿ ಹಾಗೂ ಮೈಸೂರು ನಡುವೆ ವಿಮಾನ ಯಾನ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದರು.