ಭಾರತಿನಗರ ಬಳಿಯ ನೆಹರೂಪುರದ ನಿವಾಸಿ ಅನಿಲ್ ಪೇಂಟರ್ ಕೆಲಸ ಮಾಡುತ್ತಿದ್ದರು. ಹೋಟೆಲ್ ಎದುರು ನಿಂತಿದ್ದ ಅವರ ಬಳಿ ಆರೋಪಿಯು, ಕುಡಿಯಲು ಹಣ ಕೇಳಿದ್ದ. ನಿರಾಕರಿಸಿದ್ದಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸಲಾರಂಭಿಸಿದ್ದ. ನಂತರ, ಅವರಿಬ್ಬರ ನಡುವೆ ಮಾತಿನ ಚಕಮಕಿ ನಡೆದಿತ್ತು. ಆಗ ಆರೋಪಿಯು ಅವರ ಮೇಲೆ ಕಲ್ಲು ಎತ್ತಿಹಾಕಿದ್ದ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ದಿದ್ದರು ಎಂದು ಪೊಲೀಸರು ತಿಳಿಸಿದರು.