ತುಮಕೂರು: ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ರಾಜ್ಯ ಸರ್ಕಾರ ಶಿಫಾರಸು ಮಾಡಿರುವುದನ್ನು ಸಿದ್ದಗಂಗಾ ಮಠ ಸ್ವಾಗತಿಸಿದೆ.
ಈ ಕುರಿತು ಮಾಧ್ಯಮಗಳ ಜತೆ ಮಾತನಾಡಿದ ಸಿದ್ದಲಿಂಗ ಸ್ವಾಮೀಜಿ ವೀರಶೈವ ಮತ್ತು ಲಿಂಗಾಯತ ಇಬ್ಬರನ್ನು ಸೇರಿಸಿ ಶಿಫಾರಸು ಮಾಡಿರುವುದು ಸ್ವಾಗತ ಮತ್ತು ಸಂತೋಷ.
ಜೈನಧರ್ಮದವರೂ ಕೆಲವು ಹಿಂದೂ ಧರ್ಮದ ಆಚರಣೆಗಳನ್ನು ಅನುಸರಿಸುತ್ತಿದ್ದಾರೆ. ಪ್ರತ್ಯೇಕವಾದ ತಕ್ಷಣ ಹಿಂದೂ ಧರ್ಮಕ್ಕೆ ಧಕ್ಕೆ ಆಗುವುದಿಲ್ಲ. ಹಿಂದೂ ಧರ್ಮ ಆಳವಾಗಿ ಬೇರುಬಿಟ್ಟಿದೆ. ಸಚಿವ ಸಂಪುಟದ ನಿರ್ಣಯವನ್ನು ಸ್ವಾಗತಿಸಲೇಬೇಕು. ಎಲ್ಲರನ್ನೂ ಒಳಗೊಂಡು ಹೋಗಬೇಕು ಎನ್ನುವುದೇ ನಮ್ಮ ಆಶಯ ಎಂದರು.
ಇದರಿಂದ ಅಲ್ಪಸಂಖ್ಯಾತರ ಸೌಲಭ್ಯಗಳು ಸಮಾಜಕ್ಕೆ ಸಿಕ್ಕಿದರೆ ಸಮಾಜದ ಅಭಿವೃದ್ಧಿ ಸಾಧ್ಯ. ಕೆಲವು ಸ್ವಾಮೀಜಿಗಳು ವಿರೋಧ ವ್ಯಕ್ತಪಡಿಸಿರಬಹುದು ಅದು ಅವರ ಅವರ ವೈಯಕ್ತಿಕ ನಿರ್ಧಾರ ಎಂದರು.