ಗ್ರಾಮದ ರೈತ ಸಿದ್ದೇಗೌಡ ಎಂಬುವವರಿಗೆ ಸೇರಿದ 2 ಎಕರೆ ಜಮೀನಿನಲ್ಲಿ ಬೆಳೆದಿದ್ದ, ಕಟಾವಿನ ಹಂತಕ್ಕೆ ಬಂದಿದ್ದ ನೇಂದ್ರ ಬಾಳೆ ಗಿಡಗಳು ಏಕಾಏಕಿ ಬೀಸಿದ ಗಾಳಿ, ಮಳೆಗೆ ಉರುಳಿ ಬಿದ್ದಿವೆ. ಅಲ್ಲದೇ, ಬಿಳಿಗಿರಿರಂಗನಬೆಟ್ಟದ ತಪ್ಪಲಿನಲ್ಲೂ ಭಾರಿ ಮಳೆ ಸುರಿದ ಪರಿಣಾಮ ಕೆ. ದೇವರಹಳ್ಳಿ, ಮುರಟಿಪಾಳ್ಯ, ಗಂಗವಾಡಿ, ಗೌಡಹಳ್ಳಿ, ಯರಗಂಬಳ್ಳಿ ಗ್ರಾಮಗಳಲ್ಲಿ ಬಾಳೆ, ಮುಸುಕಿನ ಜೋಳ, ರಾಗಿ ಸೇರಿದಂತೆ ಅನೇಕ ಫಸಲುಗಳು ನಷ್ಟವಾಗಿದೆ. ಮನೆಗಳಿಗೆ ಹಾಕಲಾಗಿದ್ದ ತೆಂಗಿನ ಗರಿ, ಶೀಟ್ಗಳು ಹಾರಿ ಹೋಗಿವೆ. ಹೀಗಾಗಿ ಹಬ್ಬದ ಸಂಭ್ರಮ ಇಲ್ಲಿ ಕಾಣದಾಗಿತ್ತು.