ಕೆಲವು ಓಣಿಗಳಲ್ಲಿ ಸೊಳ್ಳೆಗಳ ಹಾವಳಿ ಹೆಚ್ಚಿದೆ. ಉಪ ಆರೋಗ್ಯ ಕೆಂದ್ರದಲ್ಲಿ ಸುಸಜ್ಜಿತ ವ್ಯವಸ್ಥೆಗಳಿದ್ದರು ಸ್ವಚ್ಛತೆ ಇಲ್ಲದಾಗಿದೆ. ಕಾಪೌಂಡ್ಗೆ ಬಾಗಿಲು ಹಾಕಬೇಕಿದೆ. ಕೇಂದ್ರಕ್ಕೆ ಬರುವ ರೋಗಿಗಳಿಗೆ ಕುಡಿವ ನೀರು ಮತ್ತು ಕುಳಿತುಕೊಳ್ಳಲು ಆಸನ ವ್ಯವಸ್ಥೆ ಮಾಡಬೇಕಿದೆ ಎನ್ನುತ್ತಾರೆ ಗ್ರಾಮಸ್ಥರು.
**
ಪ್ರೌಢಶಾಲೆಯಲ್ಲಿ ಶಿಕ್ಷಕರ ಕೊರತೆಯಿಂದ ವಿದ್ಯಾರ್ಥಿಗಳ ಫಲಿತಾಂಶದಲ್ಲಿ ಹಿನ್ನಡೆ ಆಗುತ್ತಿದೆ. ಶಾಲಾ ಉಸ್ತುವಾರಿ ಸಮಿತಿ ರಚನೆ ಮಾಡಿಲ್ಲ.
– ಶರಣಪ್ಪ ಕುಂಬಾರ, ಮೆಣೇಧಾಳ ನಿವಾಸಿ