ತಮ್ಮ ನಿವಾಸದಲ್ಲಿ ಮಂಗಳವಾರ ವೀರಶೈವ ಮಠಾಧೀಶರ ಜತೆ ಸಭೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ, ‘ಲಿಂಗಾಯತ ಹಾಗೂ ವೀರಶೈವ ಲಿಂಗಾಯತರಿಗೆ ಪ್ರತ್ಯೇಕ ಅಲ್ಪಸಂಖ್ಯಾತ ಧರ್ಮದ ಮಾನ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದರೆ ಸಂತಸವಾಗುತ್ತಿತ್ತು. ಆದರೆ, ‘ಬಸವತತ್ವ ಒಪ್ಪಿತ’ ಎಂಬ ಅಂಶ ಸೇರಿಸಿರುವುದು ಸರಿಯಲ್ಲ. ಬಸವಣ್ಣನ ತತ್ವಗಳನ್ನು ಒಪ್ಪುವುದು ಬಿಡುವುದು ಅವರವರಿಗೆ ಬಿಟ್ಟ ವಿಚಾರ’ ಎಂದು ವಾಗ್ದಾಳಿ ನಡೆಸಿದರು.