ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ: ಸರ್ಕಾರಿ ಅಧಿಕಾರಿಗಳ ತಕ್ಷಣ ಬಂಧನಕ್ಕೆ ತಡೆ

Last Updated 20 ಮಾರ್ಚ್ 2018, 11:29 IST
ಅಕ್ಷರ ಗಾತ್ರ

ನವದೆಹಲಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವ್ಯಕ್ತಿಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅಡಿ ಸರ್ಕಾರಿ ನೌಕರರ ವಿರುದ್ಧ ದೂರು ದಾಖಲಾದರೂ ತಕ್ಷಣಕ್ಕೆ ಜಾರಿಯಾಗುವಂತೆ ಅವರನ್ನು ಬಂಧಿಸಕೂಡದು ಎಂದು ಸುಪ್ರೀಂ ಕೋರ್ಟ್‌ ಮಂಗಳವಾರ ಆದೇಶ ನೀಡಿದೆ.

ಈ ಕಾಯ್ದೆಯ ಅಡಿ ಯಾವುದೇ ಸರ್ಕಾರಿ ನೌಕರರನ್ನು ಬಂಧಿಸುವ ಮೊದಲು ಪ್ರಕರಣದ ಬಗ್ಗೆ ಡಿವೈಎಸ್‌ಪಿ ಅಥವಾ ಅದಕ್ಕಿಂತ ಮೇಲಿನ ದರ್ಜೆಯ ಪೊಲೀಸ್‌ ಅಧಿಕಾರಿಗಳು ಪ್ರಾಥಮಿಕ ತನಿಖೆ ನಡೆಸುವುದು ಕಡ್ಡಾಯ ಎಂಬ ಷರತ್ತು ವಿಧಿಸಿದೆ.

ಸರ್ಕಾರಿ ನೌಕರರ ವಿರುದ್ಧ ಎಸ್‌ಸಿ, ಎಸ್‌ಟಿ ಕಾಯ್ದೆಯ ದುರ್ಬಳಕೆ ಹೆಚ್ಚಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿದ ನ್ಯಾಯಮೂರ್ತಿಗಳಾದ ಆದರ್ಶ್‌ ಗೋಯೆಲ್‌ ಮತ್ತು ಯು.ಯು. ಲಲಿತ್‌ ಅವರ ಪೀಠ ಮಂಗಳವಾರ ಈ ಮಹತ್ವದ ಆದೇಶ ಹೊರಡಿಸಿದೆ.

ನಿರ್ದೇಶನ: ಈ ಕಾಯ್ದೆ ಅಡಿ ಸರ್ಕಾರಿ ನೌಕರರನ್ನು ಬಂಧಿಸುವ ಮುನ್ನ ಮತ್ತು ನಂತರ ಪಾಲಿಸಬೇಕಾದ ಕ್ರಮಗಳ ಕುರಿತು ಸುಪ್ರೀಂ ಕೋರ್ಟ್‌ ಕೆಲವು ನಿರ್ದೇಶನ ನೀಡಿದೆ. ಕಾಯ್ದೆ ಅಡಿ ಸರ್ಕಾರಿ ನೌಕರ ವಿರುದ್ಧ ದೂರು ದಾಖಲಾದರೆ ಅವರಿಗೆ ನಿರೀಕ್ಷಣಾ ಜಾಮೀನು ನಿರಾಕರಿಸುವಂತಿಲ್ಲ ಎಂದೂ ಪೀಠ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT