ಪೊಲೀಸರು ಮತ್ತು ರೈಲ್ವೆ ಅಧಿಕಾರಿಗಳು ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದರು. ಆದರೆ, ‘ನಾಲ್ಕು ವರ್ಷಗಳಿಂದ ರೈಲ್ವೆ ನೇಮಕಾತಿ ನಡೆದಿಲ್ಲ. ಹತ್ತಕ್ಕೂ ಹೆಚ್ಚು ಅಭ್ಯರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಮರುಕಳಿಸಲು ಬಿಡುವುದಿಲ್ಲ. ರೈಲ್ವೆ ಸಚಿವರು ಬಂದು ನಮ್ಮೊಂದಿಗೆ ಚರ್ಚೆ ನಡೆಸುವವರೆಗೂ ನಾವು ಈ ಸ್ಥಳ ಬಿಟ್ಟು ಕದಲುವುದಿಲ್ಲ’ ಎಂದು ಪ್ರತಿಭಟನಾಕಾರರು ಹೇಳಿದರು.