ಮಂಗಳವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಗಂಡಸಿ ಸದಾನಂದಸ್ವಾಮಿ, ‘18 ಅಡಿ ಎತ್ತರದ ಈ ಪುತ್ಥಳಿಯನ್ನು ಶಿಲ್ಪ ಕಲಾವಿದ ಜಾನ್ ದೇವರಾಜ್ ರೂಪಿಸಿದ್ದಾರೆ. ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಇದೇ 23ರಂದು ಬೆಳಿಗ್ಗೆ 11.30ಕ್ಕೆ ಪುತ್ಥಳಿ ಅನಾವರಣ ಮಾಡಲಿದ್ದಾರೆ. ಸಂಸದ ಪಿ.ಸಿ.ಮೋಹನ್, ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಮೇಯರ್ ಆರ್. ಸಂಪತ್ ರಾಜ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ’ ಎಂದರು.