ಮಧ್ಯಾಹ್ನದಿಂದಲೇ ಮೋಡಕವಿದ ದರುದರುವಾತಾವರಣವಿತ್ತು, ಮೊದಲು ಜಿಟಿಜಿಟಿ ಮಳೆ ಆರಂಭವಾಗಿ ನಂತರ ರಭಸದಿಂದ ಸುರಿಯಿತು. ಧಾರವಾಡದ ಟೋಲ್ನಾಕಾ, ಲಕ್ಷ್ಮಿ ಟಾಕೀಸ್ ವೃತ್ತ, ಸೆಂಟ್ರಲ್ ಪಾರ್ಕ್ ಸೇರಿದಂತೆ ಇನ್ನಿತರ ಕಡೆಗಳಲ್ಲಿ ಅಂಗಡಿಗಳಿಗೆ ನೀರು ನುಗ್ಗಿದ್ದರಿಂದ ವ್ಯಾಪಾರಿಗಳಿಗೆ ತೊಂದರೆಯಾಯಿತು. ತಗ್ಗು ಪ್ರದೇಶಗಳಲ್ಲಿರುವ ಮನೆಗಳಿಗೂ ನೀರು ನುಗ್ಗಿದ್ದರಿಂದ ನಿವಾಸಿಗಳು ಪರದಾಡಿದರು.