ಬ್ಯಾಡಗಿ: ರೈತರ ಸಾಲ ಮನ್ನಾ, ಲೋಕಪಾಲ್ ಮಸೂದೆ ಹಾಗೂ ಡಾ.ಸ್ವಾಮಿನಾಥನ್ ವರದಿ ಜಾರಿಗೆ ಆಗ್ರಹಿಸಿ ದೆಹಲಿ ಜಂತರ್ ಮಂಥರ್ನಲ್ಲಿ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ನಡೆಸುವ ಅನಿರ್ದಿಷ್ಟಾವಧಿ ಸತ್ಯಾಗ್ರಹ ಬೆಂಬಲಿಸಿ ಮಾ.23 ರಂದು ಜಿಲ್ಲಾ ಕೇಂದ್ರದಲ್ಲಿ ಬೈಕ್ ರ್ಯಾಲಿ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕದ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ಹೇಳಿದರು.
ಪಟ್ಟಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾಧಿಕಾರಿ ಕಚೇರಿ ಎದುರು ಅಹೋರಾತ್ರಿ ಹೋರಾಟ ನಡೆಸಿದ್ದರೂ ಕೂಡಾ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಣ್ಣು ತೆರೆಯಲಿಲ್ಲ ಎಂದು ಆರೋಪಿಸಿದರು.
ತಾಲ್ಲೂಕು ಘಟಕದ ಅಧ್ಯಕ್ಷ ರುದ್ರಗೌಡ ಕಾಡನಗೌಡ್ರ, ಕಿರಣ ಕುಮಾರ ಗಡಿಗೋಳ, ಹಸಿರು ಸೇನೆ ತಾಲ್ಲೂಕು ಘಟಕದ ಅಧ್ಯಕ್ಷ ಗಂಗಣ್ಣ ಎಲಿ, ಮುಖಂಡರಾದ ಮಲ್ಲೇಶಪ್ಪ ಡಂಬಳ, ಕೆ.ವಿ.ದೊಡ್ಡಗೌಡ್ರ ಇದ್ದರು.