‘ರೈತರ ಕಷ್ಟವನ್ನು ಮನಗಂಡ ರಾಜ್ಯ ಸರ್ಕಾರ ಅವರ ನೆರವಿಗೆ ಧಾವಿಸಿದೆ. ಸಹಕಾರ ಸಂಸ್ಥೆಗಳಿಂದ ಅಲ್ಪಾವಧಿ ಕೃಷಿ ಸಾಲ ಪಡೆದು 2017ರ ಜೂನ್ 20ಕ್ಕೆ ಹೊರಬಾಕಿ ಹೊಂದಿರುವ ಎಲ್ಲ ರೈತರಿಗೂ ₹ 50 ಸಾವಿರದವರೆಗೆ ಸಾಲ ಮನ್ನಾ ಮಾಡಲಾಗಿದೆ. ಇದರಿಂದ ಸರ್ಕಾರಕ್ಕೆ ₹8,165 ಕೋಟಿ ಹೊರೆ ಬೀಳಲಿದೆ. ಆದರೂ ರೈತರ ಸಾಲದ ಋಣವನ್ನು ಕಡಿಮೆ ಮಾಡುವ ಸಲುವಾಗಿ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ರೈತರು ಇದರ ಸದುಪಯೋಗ ಪಡೆದು, ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿ
ಕೊಳ್ಳಬೇಕು’ ಎಂಬುದು ಪತ್ರದ ಒಕ್ಕಣೆ.