ಮೈಸೂರು: ‘ನಾನು ಕೂಡಾ ಕೃಷ್ಣರಾಜ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ. ನನ್ನ ಸ್ಪರ್ಧೆಯ ಬಗ್ಗೆ ರಾಜ್ಯದ ನಾಯಕರು ತೀರ್ಮಾನ ತೆಗೆದುಕೊಳ್ಳುತ್ತಾರೆ’ ಎಂದು ಚಲನಚಿತ್ರ ನಟಿ ಮಾಳವಿಕಾ ಅವಿನಾಶ್ ಹೇಳಿದ್ದಾರೆ.
ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಮಾಧ್ಯಮ ಕೇಂದ್ರ ಆರಂಭಿಸು ವುದಕ್ಕೆ ಸಂಬಂಧಿಸಿದ ಸಭೆಯಲ್ಲಿ ಪಾಲ್ಗೊಳ್ಳಲು ಅವರು ಮಂಗಳವಾರ ನಗರಕ್ಕೆ ಬಂದಿದ್ದರು. ‘ಪಕ್ಷವನ್ನು ಸಂಘಟಿಸುತ್ತಿದ್ದು, ಟಿಕೆಟ್ ದೊರೆ ತರೆ ಸ್ಪರ್ಧಿಸುತ್ತೇನೆ’ ಎಂದು ಪ್ರತಿಕ್ರಿಯಿಸಿದ್ದಾರೆ.
ಕೆ.ಆರ್. ಕ್ಷೇತ್ರದಿಂದ ಟಿಕೆಟ್ ಗಿಟ್ಟಿಸಲು ಬಿಜೆಪಿಯ ಎಸ್.ಎ.ರಾಮದಾಸ್, ಎಚ್.ವಿ.ರಾಜೀವ್, ಶಿವಪ್ರಕಾಶ್, ಫಣೀಶ್ ಅವರು ಪೈಪೋಟಿ ನಡೆಸುತ್ತಿದ್ದಾರೆ.