ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಮಹಾಂತೇಶ ಮಸ್ಕಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಲ್ಮಠದ ಪೀಠಾಧ್ಯಕ್ಷ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಕೃತಿಯ ಲೇಖಕ ರಮೇಶಬಾಬು ಯಾಳಗಿ, ಡಾ.ಪ್ರಜ್ಞಾ ಹರಿಪ್ರಸಾದ, ಪುರಸಭೆಯ ಮುಖ್ಯಾಧಿಕಾರಿ ವೆಂಕಟೇಶ, ಕಸಾಪ ತಾಲ್ಲೂಕು ಅಧ್ಯಕ್ಷ ಮೂಕಪ್ಪ ಕಟ್ಟಿಮನಿ, ಪತ್ರಕರ್ತರ ಸಂಘದ ಅಧ್ಯಕ್ಷ ಪಿ.ಪರಮೇಶ, ಕನ್ನಡ ಜಾನಪದ ಪರಿಷತ್ ಅಧ್ಯಕ್ಷ ತಾಯಪ್ಪ ಬಿ.ಹೊಸೂರು, ಪಕ್ಷಿಪ್ರೇಮಿ ಸಲಾವುದ್ದೀನ್, ಎಚ್.ಶರ್ಪುದ್ದೀನ್ ಪೋತ್ನಾಳ, ಅಮ್ಜದ್ ಖಾನ್, ನೇತಾಜಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕೆ.ಈ.ನರಸಿಂಹ, ಕಾರ್ಯದರ್ಶಿ ಕೆ.ವಿಜಯಲಕ್ಷ್ಮೀ ಇದ್ದರು.