ಯಾದಗಿರಿ: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿರುವ ಪ್ರಕರಣ ವಿಚಾರಣೆ ನಡೆಸಿರುವ ಇಲ್ಲಿನ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯ ಅಪರಾಧಿ ನಾಗರಾಜ್ ಗೆ 5 ವರ್ಷ ಜೈಲು ಶಿಕ್ಷೆ ವಿಧಿಸಿದ್ದು, ಸಂತ್ರಸ್ತ ಬಾಲಕಿಗೆ ₹2.50 ಲಕ್ಷ ಪರಿಹಾರ ನೀಡುವಂತೆ ಆದೇಶಿಸಿ ತೀರ್ಪು ಪ್ರಕಟಿಸಿದೆ.
ಸುರಪುರ ತಾಲ್ಲೂಕಿನ ಹೇಮನೂರು ಗ್ರಾಮದಲ್ಲಿ 2017ರ ಜನನವರಿಯಲ್ಲಿ ಬಾಲಕಿ ಅತ್ಯಾಚಾರ ಪ್ರಕರಣ ನಡೆದಿತ್ತು. ಸಂತ್ರಸ್ತ ಬಾಲಕಿ ದೂರು ದಾಖಲಿಸಿದ್ದಳು.
ವಿಚಾರಣೆ ನಡೆಸಿರುವ ನ್ಯಾಯಾಧೀಶ ನಾರಾಯಣ ನಾಯಕ್ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ಶಿಕ್ಷೆ ವಿಧಿಸಿದ್ದಾರೆ. ಸಂತ್ರಸ್ತ ಬಾಲಕಿ ಪರವಾಗಿ ಸರ್ಕಾರಿ ವಕೀಲ ಎಸ್.ಅನಂತರಡ್ಡಿ ವಾದ ಮಂಡಿಸಿದ್ದರು.