ಬೆಂಗಳೂರು: ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ಅವರನ್ನು ಕರ್ನಾಟಕ ಗಡಿ ರಕ್ಷಣಾ ಆಯೋಗದ ಅಧ್ಯಕ್ಷರ ನ್ನಾಗಿ ನೇಮಿಸಿ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಈ ಹಿಂದೆ ಅಧ್ಯಕ್ಷರಾಗಿದ್ದ ಎಸ್. ರಾಜೇಂದ್ರ ಬಾಬು 2017ರ ನವೆಂಬರ್ನಲ್ಲಿ ರಾಜೀನಾಮೆ ನೀಡಿದ್ದರು. ಆ ಸ್ಥಾನಕ್ಕೆ ಮಂಜುನಾಥ್ ಅವರನ್ನು ನೇಮಿಸಿ ಆದೇಶಿಸಲಾಗಿದೆ. ಉಪಲೋಕಾಯುಕ್ತರ ಹುದ್ದೆಗೆ ಮಂಜುನಾಥ್ ಅವರ ಹೆಸರನ್ನು ಸರ್ಕಾರ 3 ಬಾರಿ ಶಿಫಾರಸು ಮಾಡಿತ್ತು. 3 ಬಾರಿಯೂ ರಾಜ್ಯಪಾಲರು ವಾಪಸ್ ಕಳುಹಿಸಿದ್ದರು.