ಧಾರವಾಡ: ‘ರಾಜ್ಯ ಸರ್ಕಾರವು ತಮಗೆ ಬಸವ ರಾಷ್ಟ್ರೀಯ ಪುರಸ್ಕಾರ ನೀಡುವುದಕ್ಕೂ ಮುನ್ನವೇ, ಎಸ್.ನಿಜಲಿಂಗಪ್ಪ ಅವರು ಕರ್ನಾಟಕದ ಮೊಟ್ಟ ಮೊದಲ ಮುಖ್ಯಮಂತ್ರಿ ಎಂದು ತನ್ನ ದಾಖಲೆಗಳಲ್ಲಿ ತಿದ್ದಿಕೊಳ್ಳಬೇಕು. ಇಲ್ಲದಿದ್ದಲ್ಲಿ, ಪ್ರಶಸ್ತಿ ಸ್ವೀಕರಿಸುವ ಬಗ್ಗೆ ವಿಚಾರ ಮಾಡಬೇಕಾಗುತ್ತದೆ’ ಎಂದು ಹಿರಿಯ ಪತ್ರಕರ್ತ ಪಾಟೀಲ ಪುಟ್ಟಪ್ಪ ಹೇಳಿದರು.