ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೊಂದಲಗಳು ಬಗೆಹರಿಯಲಿವೆ

Last Updated 21 ಮಾರ್ಚ್ 2018, 19:30 IST
ಅಕ್ಷರ ಗಾತ್ರ

ದಾವಣಗೆರೆ: ಇದೇ 23ರಂದು ವೀರಶೈವ ಮಹಾಸಭಾದ ಸಭೆ ಇದ್ದು, ಅಂದು ಎಲ್ಲಾ ಗೊಂದಲಗಳು ಬಗೆಹರಿಯಲಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಎಸ್.ಮಲ್ಲಿಕಾರ್ಜುನ ವಿಶ್ವಾಸ ವ್ಯಕ್ತಪಡಿಸಿದರು.

ನಗರದ ಕೆಎಸ್‌ಆರ್‌ಟಿಸಿ ಬಸ್‌ ಡಿಪೊ ಹಿಂಭಾಗದಲ್ಲಿ ಬುಧವಾರ ಇಂದಿರಾ ಕ್ಯಾಂಟೀನ್‌ ಉದ್ಘಾಟಿಸಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

‘ಸರ್ಕಾರ ನ್ಯಾ.ನಾಗಮೋಹನದಾಸ್‌ ವರದಿ ಅನ್ವಯ ಲಿಂಗಾಯತಕ್ಕೆ ಸ್ವತಂತ್ರ ಧರ್ಮ ಶಿಫಾರಸು ಮಾಡಿದೆ. ಈ ಬಗ್ಗೆ ಇನ್ನಷ್ಟು ಚರ್ಚೆ ನಡೆಯಲಿ. ವೀರಶೈವ ಮಹಾಸಭಾದ ಸಭೆಯಲ್ಲಿ ಎಲ್ಲರಿಗೂ ಸಮಾಧಾನವಾಗುವ ರೀತಿಯಲ್ಲಿ ತೀರ್ಮಾನ ಹೊರಬೀಳಬಹುದು’ ಎಂದು ಹೇಳಿದರು.

‘ಸ್ವಾಮೀಜಿಗಳ ಮಧ್ಯೆ ಘರ್ಷಣೆ ಆಗಬಾರದು. ಸಮಾಜ ಒಗ್ಗಟ್ಟಿನಿಂದ ಇರುವ ರೀತಿಯಲ್ಲಿ ನಿರ್ಧಾರ ಕೈಗೊಳ್ಳಬೇಕು ಎಂಬುದೇ ನನ್ನ ಅಭಿಲಾಷೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT