ಶ್ರೀನಗರ : ಕುಪ್ವಾರ ಜಿಲ್ಲೆಯ ಕಾಡಿನಲ್ಲಿ ಉಗ್ರರೊಂದಿಗೆ ನಡೆಯುತ್ತಿರುವ ಗುಂಡಿನ ಚಕಮಕಿಯಲ್ಲಿ ಮೂವರು ಸೇನಾ ಯೋಧರು ಮತ್ತು ಇಬ್ಬರು ಪೊಲೀಸರು ಹುತಾತ್ಮರಾಗಿದ್ದಾರೆ.
‘ಅರಂಪೋರಾದ ದಟ್ಟ ಅರಣ್ಯದಲ್ಲಿ ಮಂಗಳವಾರದಿಂದಲೂ ನಡೆಯುತ್ತಿರುವ ಗುಂಡಿನ ಕಾಳಗದಲ್ಲಿ ನಾಲ್ವರು ಉಗ್ರರನ್ನೂ ಹತ್ಯೆ ಮಾಡಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹುತಾತ್ಮರಾದ ಸೈನಿಕರ ಗುರುತು ಇನ್ನೂ ಪತ್ತೆಯಾಗಬೇಕಿದೆ.
ಮಸೀದಿಯಲ್ಲಿ ಅಡಗಿದ್ದ ಉಗ್ರರು ಕಾಡಿನತ್ತ ಓಡಲು ಆರಂಭಿಸಿದಾಗ ನಾಲ್ವರನ್ನು ಭದ್ರತಾ ಸಿಬ್ಬಂದಿ ಹತ್ಯೆ ಮಾಡಿದ್ದಾರೆ. ಇನ್ನಿಬ್ಬರು ಕಾಡಿನಲ್ಲಿ ಅಡಗಿರುವ ಶಂಕೆ ಇದೆ.