ಜಾಮೀನು ಕೋರಿ ನಲಪಾಡ್ ಹಾಗೂ ಆತನ ಸ್ನೇಹಿತರು ಸಲ್ಲಿಸಿದ್ದ ಅರ್ಜಿಯನ್ನು ಸ್ಥಳೀಯ ನ್ಯಾಯಾಲಯ ಹಾಗೂ ಹೈಕೋರ್ಟ್ ಈಗಾಗಲೇ ತಿರಸ್ಕರಿಸಿವೆ. ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲು ಆರೋಪಿಗಳು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಅದಕ್ಕೆ ಪ್ರತಿಯಾಗಿ ಆಕ್ಷೇಪಣೆ ಸಲ್ಲಿಸುವುದಾಗಿ ವಿದ್ವತ್ ಪರ ವಾದಿಸುತ್ತಿರುವ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಶ್ಯಾಮಸುಂದರ್ ತಿಳಿಸಿದ್ದಾರೆ.