ಬೆಂಗಳೂರು: ಐಟಿ ದಾಳಿ ನಡೆದ ಸಂದರ್ಭದಲ್ಲಿ ಸಾಕ್ಷ್ಯ ನಾಶಪಡಿಸಿದ (ದಾಖಲೆಗಳನ್ನು ಹರಿದ) ಪ್ರಕರಣಕ್ಕೆ ಸಂಬಂಧಿಸಿದಂತೆ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಗುರುವಾರ ವಿಶೇಷ ನ್ಯಾಯಾಲಯಕ್ಕೆ ಹಾಜರಾದರು.
ಸಚಿವ ಡಿ.ಕೆ.ಶಿವಕುಮಾರ್ ಅವರ ಮನೆ ಮತ್ತು ಈಗಲ್ಟನ್ ರೆಸಾರ್ಟ್ ಮೇಲೆ ಐಟಿ ದಾಳಿ ನಡೆದ ವೇಳೆ ದಾಖಲೆಗಳನ್ನು ಹರಿದ ಆರೋಪದಡಿ ವಿಶೇಷ ಜಾರಿ ನಿರ್ದೇಶನಾಲಯ (ಇಡಿ)ದ ಕೋರ್ಟ್ಗೆ ಸಹೋದರ ಡಿ.ಕೆ.ಸುರೇಶ್ ಅವರೊಂದಿಗೆ ಹಾಜರಾಗಿದ್ದಾರೆ.
ಕೋರ್ಟ್ ಕಲಾಪ ಆರಂಭವಾಗುವ ಅರ್ಧ ಗಂಟೆ ಮೊದಲೇ ಡಿ.ಕೆ.ಶಿವಕುಮಾರ್ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ವಕೀಲರೊಂದಿಗೆ ಚರ್ಚೆ ನಡೆಸಿರುವ ಅವರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸುವ ಸಾಧ್ಯತೆಗಳಿವೆ.