ರಾಜ್ಯ ನೇಕಾರರ ಸಮುದಾಯ ಒಕ್ಕೂಟದ ಅಧ್ಯಕ್ಷ ಎಂ.ಡಿ.ಲಕ್ಷ್ಮಿನಾರಾಯಣ ಮಾತನಾಡಿ, ‘ರಾಜ್ಯದಲ್ಲಿ 103 ಹಿಂದುಳಿದ ಸಮಾಜಗಳಿವೆ. ಇವುಗಳನ್ನು ಒಟ್ಟುಗೂಡಿಸುವುದು ಮತ್ತು ಸಮಾನತೆ ಕಲ್ಪಿಸುವುದು ಸರ್ಕಾರದ ಆದ್ಯತೆ. ಜಯಂತಿಯನ್ನು ಒಂದೇ ದಿನ ಆಚರಿಸುವುದರಿಂದ ಇಡೀ ಸಮಾಜ ಒಟ್ಟಿಗೆ ಸೇರಲು ಸಾಧ್ಯವಾಗುತ್ತಿಲ್ಲ. ಮುಂದಿನ ದಿನಗಳಲ್ಲಿ ಮಹಾತ್ಮರ ಜಯಂತಿಯನ್ನು ರಾಜ್ಯಮಟ್ಟದಲ್ಲಿ ಒಂದು ದಿನ, ಉಳಿದ ದಿನಗಳಲ್ಲಿ ಜಿಲ್ಲಾ, ತಾಲ್ಲೂಕುಮಟ್ಟದಲ್ಲಿ ಆಚರಿಸುವ ವ್ಯವಸ್ಥೆ ಜಾರಿಗೆ ಬರಬೇಕಿದೆ’ ಎಂದರು.