ಪ್ರಕರಣವೇನು?: ‘ಪ್ರತಿವಾದಿ ಶಾಸಕರಾದ ಜಮೀರ್ ಅಹಮದ್ ಖಾನ್, ಚೆಲುವರಾಯ ಸ್ವಾಮಿ, ಎ.ಬಿ.ರಮೇಶ್ ಬಂಡಿಸಿದ್ದೇಗೌಡ, ಎಚ್.ಸಿ.ಬಾಲಕೃಷ್ಣ, ಆರ್.ಅಖಂಡ ಶ್ರೀನಿವಾಸ ಮೂರ್ತಿ, ಇಕ್ಬಾಲ್ ಅನ್ಸಾರಿ ಹಾಗೂ ಎಸ್. ಭೀಮಾನಾಯ್ಕ್ 2016ರ ಜೂನ್ 11ರಂದು ನಡೆದಿದ್ದ ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿ ಅಡ್ಡ ಮತದಾನ ಮಾಡಿದ್ದಾರೆ. ಆದ್ದರಿಂದ ಇವರನ್ನು ಪಕ್ಷಾಂತರ ನಿಷೇಧ ಕಾಯ್ದೆ–1986ರ ಅನ್ವಯ ಅನರ್ಹಗೊಳಿಸಿ’ ಎಂದು ನಿಂಗಯ್ಯ ಹಾಗೂ ಬಾಲಕೃಷ್ಣ ಸ್ಪೀಕರ್ಗೆ ದೂರು ಸಲ್ಲಿಸಿದ್ದರು.